ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ 4 ರಿಂದ 5 ಸಾವಿರ ಕೋಟಿ ಮೀಸಲಿಡುವುದಾಗಿ ಹೇಳಿದ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿವೆ. ಸಿಎಂ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ನಾನು ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಮೀಸಲು ನೀಡಿದ್ದರಲ್ಲಿ ತಪ್ಪೇನು ಎಂದರು.
ಮುಸ್ಲಿಂರು ಸೇರಿ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಇದಕ್ಕೆ ಉಪ್ಪು ಖಾರ ಹಾಕಿ ಹೇಳುತ್ತಿದ್ದಾರೆ ಅಂತಾ ಹೇಳಿದರು. ಕಾಂಗ್ರೆಸ್ ನವರು ಕೋಮುವಾದಿಗಳು. ಎಲ್ಲರನ್ನು ಸಮಾನವಾಗಿ ನೋಡುವ ಕೆಲಸ ಮಾಡದೆ. ಎಲ್ಲರ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದ್ದಾರೆ ಅಂತಾ ಬಿಜೆಪಿ ಮಾಜಿ ಸಚಿವ ಅಶ್ವತ್ಥನಾರಾಯಣ ಕಿಡಿ ಕಾರಿದರು.