ಪಾಕ್ ಪರ ಪೋಸ್ಟ್: ಯುವಕನ ಬಂಧನ

147

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಪಾಕಿಸ್ತಾನ ಪರವಾದ ಪೋಸ್ಟ್ ವೊಂದನ್ನು ವಾಟ್ಸಪ್ ಗ್ರೂಪ್ ನಲ್ಲಿ ಹಾಕಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಕಾನಬಾವಿ ನಿವಾಸಿ  ವಿರೇಶ ಪರಯ್ಯ ಕರ್ಪೂರಮಠ(31) ಬಂಧಿತ ಆರೋಪಿ.

ಕಾಂಗ್ರೆಸ್ ಶಾಸಕರಾಗಿ ಆಯ್ಕೆ ಆಗಿರುವ ಅಪ್ಪಾಜಿ ನಾಡಗೌಡರ ಹೆಸರಲ್ಲಿನ ವಾಟ್ಸಪ್ ಗ್ರೂಪ್ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿದ್ದಾನೆ. ಇದು ಎಲ್ಲೆಡೆ ವೈರಲ್ ಆಗಿದೆ. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿ ವಿರೇಶ ತಪ್ಪು ಮಾಡಿರುವು ಒಪ್ಪಿಕೊಂಡಿದ್ದಾನೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಇದೀಗ ಈತನ್ನು ವಿಜಯಪುರದ ದರ್ಗಾ ಜೈಲಿಗೆ ಕಳಿಸಲಾಗಿದೆ. ಈ ಘಟನೆ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!