ಹುಬ್ಬಳ್ಳಿ: ಪಾಕಿಸ್ತಾನದ ಪರ ಜೈಕಾರ ಹಾಕಿದ್ದ ಕೆಎಲ್ಇ ಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ ನಿನ್ನೆ ತಡರಾತ್ರಿ ಬಿಡುಗಡೆ ಮಾಡಲಾಗಿದೆ. ಮೂವರು ಕಾಶ್ಮೀರಿ ವಿದ್ಯಾರ್ಥಿಗಳಾದ ಅರ್ಮಿ, ತಾಲೀಬ್ ಹಾಗೂ ಬಾಸಿತ್ ಕಡೆಯಿಂದ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ.
ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಬಾಂಡ್ ಬರೆದು ಕೊಟ್ಟಿದ್ದಾರೆ. ವಿಚಾರಣೆ ಟೈಂನಲ್ಲಿ ಸಹಕಾರ ನೀಡಬೇಕೆಂದು ಹೇಳಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಆಯುಕ್ತ ಆರ್.ದಿಲೀಪ ಸ್ಪಷ್ಟಪಡಿಸಿದ್ದಾರೆ.
ಈ ಮೂವರು ವಿದ್ಯಾರ್ಥಿಗಳ ಮೇಲೆ 124ಎ, 153ಎ(ಬಿ), 153ಬಿ(ಸಿ), 505(2) ಹಾಗೂ ಆರ್ ಡಬ್ಲ್ಯು 35 ಕಾಯ್ದೆ ಅಡಿಯಲ್ಲಿ ಐದು ಕೇಸ್ ಗಳು ದಾಖಲಾಗಿವೆ. ಇದೀಗ ಅವರನ್ನ ಬಿಡುಗಡೆ ಮಾಡಲಾಗಿದ್ದು, ಕಾಲೇಜು ಆಡಳಿತ ಮಂಡಳಿ ವಾಹನದಲ್ಲಿ ಬೆಳಗಾವಿಗೆ ಶಿಫ್ಟ್ ಮಾಡಿರುವುದು ಹಲವು ಅನುಮಾನಗಳನ್ನ ಮೂಡಿಸಿದೆ.