ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಲ ಆನೇಕಲ್ ಬಾಲರಾಜ್ ಇಂದು ಅಪಘಾತದಲ್ಲಿ ನಿಧನರಾಗಿದ್ದಾರೆ. ಬೆಳಗ್ಗೆ ಜೆ.ಪಿ ನಗರದಲ್ಲಿ ವಾಕಿಂಗ್ ಹೋಗಿದ್ದ ವೇಳೆ ಅಪಘಾತವಾಗಿದೆ.
ತೆಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ದರ್ಶನ್ ನಟನೆಯ ಕರಿಯಾ, ಇವರ ಪುತ್ರ ಸಂತೋಷ್ ನಟನೆಯ ಕರಿಯಾ-2, ಗಣಪ, ಬರ್ಕಿ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಿಸಿದ್ದಾರೆ.