ಪ್ರಜಾಸ್ತ್ರ ಸಿನಿಮಾ ಡೆಸ್ಕ್
ನಟ ಸುದೀಪ್ ಹಾಗೂ ನಿರ್ಮಾಪಕ ಎಂ.ಎನ್ ಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ. ಈ ಸಂಬಂಧ ನಟ ಸುದೀಪ್ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಇದೀಗ ನಿರ್ಮಾಪಕ ಎಂ.ಎನ್ ಕುಮಾರ್ ಪ್ರತಿಭಟನೆ ನಡೆಸಿದ್ದಾರೆ.
ಫಿಲ್ಮ್ ಚೇಂಬರ್ ಎದುರು ಇರುವ ವರನಟ ಡಾ.ರಾಜಕುಮಾರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದ ನಂತರ ಪ್ರತಿಭಟನೆ ನಡೆಸಿದ್ದಾರೆ. ಸುದೀಪ್ ಕೋರ್ಟ್ ಮೆಟ್ಟಿಲು ಹತ್ತಿರುವುದನ್ನು ಖಂಡಿಸಿದ್ದಾರೆ. ಎಲ್ಲವೂ ಫಿಲ್ಮ್ ಚೇಂಬರ್ ನಲ್ಲಿ ಇತ್ಯರ್ಥ ಆಗಬೇಕು ಎಂದರು.
ಎಲ್ಲಿಯವರೆಗೂ ಪ್ರತಿಭಟನೆ ನಡೆಸುತ್ತೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯ ಸಿಗುವ ತನಕ ಪ್ರತಿಭಟನೆ ಮಾಡುತ್ತೇನೆ ಎಂದಿದ್ದಾರೆ.