ಬೆಳ್ಳಂಬೆಳಗ್ಗೆ ರಾಕ್ ಲೈನ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ

266

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಡುವಿನ ಮಾತಿನ ಸಮರದಲ್ಲಿ ಹಲವರು ಎಂಟ್ರಿ ಕೊಟ್ಟಿದ್ದಾರೆ. ಸುಮಲತಾ ಪರವಾಗಿ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ, ಹಿರಿಯ ನಟ ದೊಡ್ಡಣ್ಣ ಹಾಗೂ ಸುಮಲತಾ ಅಂಬರೀಶ ಪುತ್ರ ಅಭಿಷೇಕ ಬ್ಯಾಟ್ ಬೀಸಿದ್ದಾರೆ.

ಕುಮಾರಸ್ವಾಮಿ ವಿರುದ್ಧ ರಾಕ್ ಲೈನ್ ವೆಂಕಟೇಶ ಭರ್ಜರಿ ವಾಗ್ದಾಳಿ ನಡೆಸಿದ್ರು. ಕೆಲ ಗಂಭೀರ ಆರೋಪಗಳನ್ನ ಸಹ ಮಾಡಿದ್ದಾರೆ. ಇದ್ರಿಂದ ಸಿಟ್ಟಾದ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಗ್ಗೆ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮಹಾಲಕ್ಷ್ಮೀ ಬಡಾವಣೆಯಲ್ಲಿರುವ ರಾಕ್ ಲೈನ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ರು. ಇದರ ಸುಳಿವು ಮೊದಲೇ ಪಡೆದಿದ್ದ ಪೊಲೀಸರು ಬ್ಯಾರಿಕೇಡ್ ಹಾಕಿದ್ರು. ಅದನ್ನು ದಾಟಿಕೊಂಡು ಹೋಗಲು ಯತ್ನಿಸಿದಾಗ ಹಲವರನ್ನ ವಶಕ್ಕೆ ಪಡೆಯಲಾಗಿದೆ. ಈ ವೇಳೆ ರಾಕ್ ಲೈನ್ ವೆಂಕಟೇಶ ವಿರುದ್ಧ ಘೋಷಣೆ ಕೂಗಲಾಗಿದೆ.




Leave a Reply

Your email address will not be published. Required fields are marked *

error: Content is protected !!