ಪ್ರಜಾಸ್ತ್ರ ಸುದ್ದಿ
ಮುಂಬೈ: ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ 16 ಶಾಸಕರಿಗೆ ನೀಡಲಾಗಿದ್ದ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ. ಗುವಾಟಿಯ ಫೈವ್ ಸ್ಟಾರ್ ಹೋಟೆಲ್ ರಾಡಿಸ್ ಬ್ಲೂನಲ್ಲಿ 40ಕ್ಕೂ ಹೆಚ್ಚು ಶಾಸಕರು ತಂಗಿದ್ದಾರೆ. ಇದರ ನಡುವೆ 16 ಶಾಸಕರಿಗೆ ನೀಡಲಾಗಿದ್ದ ಭದ್ರತೆಯನ್ನು ಮಹಾರಾಷ್ಟ್ರ ಸರ್ಕಾರ ವಾಪಸ್ ಪಡೆದಿದೆ.
ಇನ್ನು 16 ಶಾಸಕರ ಅನರ್ಹತೆ ಕೋರಿ ಡೆಪ್ಯೂಟಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದ ಮಹಾರಾಷ್ಟ್ರ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಂಡಾಯ ಶಾಸಕರ ಗುಂಪಿನ ನಾಯಕ ಏಕನಾಥ್ ಶಿಂಧೆ, ನಮ್ಮ ಜೀವಗಳಿಗೆ ಏನಾದರು ಆದರೆ ಅದಕ್ಕೆ ಸರ್ಕಾರ ಹೊಣೆ ಎಂದಿದ್ದಾರೆ.