ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದ ಜನರು ಅರಣ್ಯ ಇಲಾಖೆ ಶಿಬಿರ ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ಆಕ್ರೋಶಕ್ಕೆ ಕಾರಣವಾಗಿರೋದು ಕಾಡಾನೆ ದಾಳಿಯನ್ನು ನಿಯಂತ್ರಣ ಮಾಡದೆ ಇರೋದು.
ಇತ್ತೀಚೆಗೆ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಮೃತಪಟ್ಟಿದ್ದರು. ಗ್ರಾಮಕ್ಕೆ ಬಂದ ಶಾಸಕರ ಮೇಲೆ ಹಲ್ಲೆ ಸಹ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಳ್ಳ ಬೇಟೆ ನಿಗ್ರಹ ಶಿಬಿರವನ್ನು ಧ್ವಂಸಗೊಳಿಸಿದ್ದಾರೆ.