ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉಪ ಸಭಾಪತಿ ಮೇಲೆ ವಿಧೇಯಕ ಪ್ರತಿ ಹರಿದು ಬೀಸಾಕಿದ ಪ್ರಕರಣ ಸಂಬಂಧ ಬುಧವಾರ ಬಿಜೆಪಿಯ 10 ಸದಸ್ಯರನ್ನು ಸದನ ಕಲಾಪದಿಂದ ಅಮಾನತುಗೊಳಿಸಲಾಗಿದೆ. ಇದನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಲಾಯಿತು.
ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್, ಸುರೇಶ್ ಕುಮಾರ್, ಹೆಬ್ಬಾರ್, ರಮೇಶ ಜಾರಕಿಹೊಳಿ, ಎಸ್.ಟಿ ಸೋಮಶೇಖರ್, ಶಾಸಕ ಅರವಿಂದ್ ಬೆಲ್ಲದ್, ಪರಿಷತ್ ಸದಸ್ಯರು ಸೇರಿದಂತೆ ಬಿಜೆಪಿ ಮುಖಂಡು ಭಾಗವಹಿಸಿ, ಸ್ಪೀಕರ್ ಯು.ಟಿ ಖಾದರ್ ಆದೇಶ ಖಂಡಿಸಿ ಪ್ರತಿಭಟನೆ ನಡೆಸಿದರು.