ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಮುರಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಪಿಡಿಓ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಅಧ್ಯಕ್ಷ ಹಾಗೂ ಪಿಡಿಓ ಅವ್ಯವಹಾರ ನಡೆಸುತ್ತಿದ್ದು, ಜಾಬ್ ಕಾರ್ಡ್ ನೀಡದೆ ಗ್ರಾಮಸ್ಥರಿಗೆ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಪಂಚಾಯತ್ಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ರು.
ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಉದ್ಯೋಗ ಖಾತ್ರಿ ಯೋಜನೆಯಡಿ ಅವ್ಯವಹಾರ ನಡೆಸಲಾಗಿದ್ದು, ಜಾಬ್ ಕಾರ್ಡ್ ನೀಡ್ತಿಲ್ಲ. ದಿನಗೂಲಿ ನೌಕರ ಸಿಬ್ಬಂದಿ, ಕುಟುಂಬದ ಸದಸ್ಯರ ಹೆಸರಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಅಧ್ಯಕ್ಷ ಹಾಗೂ ಪಿಡಿಓ ವಿರುದ್ಧ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.