ಕೃಷ್ಣಾ ತೀರದ ಮಕ್ಕಳ ಪ್ರತಿಭಟನೆ

359

ಬೆಳಗಾವಿ : ಬತ್ತಿ ಹೋಗಿರುವ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡಿಸುವಲ್ಲಿ ವಿಫಲವಾಗುತ್ತಿರುವ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯ್ತು. ಕನ್ನಡ ಪರ ಮತ್ತು ರೈತ ಪರ ಸಂಘಟನೆಗಳು ಅಥಣಿ ಹಾಗೂ ಕೃಷ್ಣಾ ತೀರದ ಜನತೆಗೆ ಸಾಥ್ ನೀಡಿದ್ದು, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.

‘ಕೃಷ್ಣಾ ನದಿಗೆ ಕೊಯ್ನಾ ನೀರು ಬಿಡುಗಡೆ ಮಾಡಲೇಬೇಕು’ ಎಂಬ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಿದ ಪ್ರತಿಭಟನಾಕಾರರು, ಹೆಚ್ಚುವರಿ ಜಿಲ್ಲಾಧಿಕಾರಿ ಬೂದಪ್ಪ ಅವರಿಗೆ ಮನವಿ ಸಲ್ಲಿಸಿದರು. ಹಿಡ್ಕಲ್ ಜಲಾಶಯದಿಂದ 94 ಕಿ.ಮೀ.ದೂರದ ಕೃಷ್ಣಾ ನದಿಗೆ ಒಂದು ಟಿ ಎಮ್ ಸಿ ನೀರು ಹರಿಸುವ ನಿರ್ಧಾರ ಅತ್ಯಂತ ಅವೈಜ್ಞಾನಿಕವಾಗಿದೆ. ಮುಂಜಾನೆ ಬಿಟ್ಟ ನೀರು ಕೃಷ್ಣಾ ನದಿ ತಲುಪಲು ಸಾಧ್ಯವಿಲ್ಲ. ಮಹಾರಾಷ್ಟ್ರಕ್ಕೆ ಸಿಎಂ ಸರ್ವಪಕ್ಷೀಯ ನಿಯೋಗ ಕಳಿಸಬೇಕು. ಬರೀ ಪತ್ರ ಬರೆಯುವದರಿಂದ ಯಾವುದೇ

ಪ್ರಯೋಜನವಾಗುವದಿಲ್ಲ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹಿಸಿದರು. ರೈತ ಹೋರಾಟಗಾರ ಸಿದ್ದಗೌಡ ಮೋದಗಿ ಅವರು ಮಾತನಾಡಿ, ಕೇವಲ ಹಿರಿಯ ಅಧಿಕಾರಿಗಳನ್ನು ಮುಂದು ಮಾಡಿದರೆ ಮಹಾರಾಷ್ಟ್ರವು ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ.ನೀರಾವರಿ ಸಚಿವರು,ಶಾಸಕರನ್ನೊಳಗೊಂಡ ನಿಯೋಗವನ್ನ ಮುಂಬೈಗೆ ಕಳಿಸಬೇಕು ಅಂತಾ ಒತ್ತಾಯಿಸಿದರು. ಇನ್ನಾದರೂ ಕೃಷ್ಣ ತೀರದ ಮಕ್ಕಳ ಗೋಳಿಗೆ ನ್ಯಾಯ ಸಿಗುತ್ತಾ ಅನ್ನೋದನ್ನ ಕಾದು ನೋಡಬೇಕು.


TAG


Leave a Reply

Your email address will not be published. Required fields are marked *

error: Content is protected !!