ಮುಧೋಳ: ಪ್ರವಾಹದಿಂದ ಬೀದಿಗೆ ಬಿದ್ದಿರುವ ಬಾಗಲಕೋಟೆ ಜಿಲ್ಲೆಯ ಜನರು ಮುಧೋಳದಲ್ಲಿ ಇಂದು ಪ್ರತಿಭಟನೆ ನಡೆಸಿದ್ರು. ವಿವಿಧ ಕನ್ನಡಪರ ಸಂಘಟನೆಗಳು, ರೈತರು ಹಾಗೂ ಸಾರ್ವಜನಿಕರು ಸೇರಿಕೊಂಡು, ನೆರೆ ಸಂತ್ರಸ್ತರಿಗೆ ವೈಜ್ಞಾನಿಕವಾಗಿ ಪರಿಹಾರ ನೀಡಿ ಎಂದು ಪ್ರತಿಭಟನೆ ನಡೆಸಿದ್ರು.
ಪ್ರತಿಭಟನೆ ಸ್ಥಳದಿಂದ ತಪ್ಪಿಸಿಕೊಂಡು ಹೋದ ಬಾಗಲಕೋಟೆ ಸಂಸದ ಪಿ.ಸಿ ಗದ್ದಿಗೌಡರನ್ನ, ಪ್ರತಿಭಟನಾಕಾರರು ವಾಪಸ್ ಕರೆದುಕೊಂಡು ಬಂದಿದ್ದಾರೆ. ಪ್ರತಿಭಟನೆ ಸ್ಥಳವನ್ನ ತಪ್ಪಿಸಿಕೊಂಡು ಹೋದ ಸಂಸದ ಪಿ.ಸಿ ಗದ್ದಿಗೌಡರನ್ನ, ಸೊರಗಾಂವಿ ಗ್ರಾಮದ ಬಳಿ ತಡೆದ ಜನರು, ಮರಳಿ ಪ್ರತಿಭಟನಾ ಸ್ಥಳಕ್ಕೆ ಕರೆದುಕೊಂಡು ಬಂದ ಘಟನೆ ನಡೆದಿದೆ.