ಸಿಂದಗಿ: ಪಟ್ಟಣದ ವಾರ್ಡ್ ನಂಬರ್ 12ರ ರೇಣುಕಾ ನಗರ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯ್ತು.
ರೇಣುಕಾ ನಗರದಲ್ಲಿ ಗೊಲ್ಲರ ಸಮುದಾಯದ ನೂರಾರು ಕುಟುಂಬಗಳಿವೆ. ಇಲ್ಲಿ ಸರಿಯಾದ ರಸ್ತೆ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಮುಖ್ಯವಾಗಿ ಶೌಚಾಲಯದ ವ್ಯವಸ್ಥೆ ಇಲ್ಲ. ಇದರ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು.
2018ರಲ್ಲಿಯೇ ಈ ಬಗ್ಗೆ ಮನವಿ ನೀಡಲಾಗಿದೆ. ಇಷ್ಟಾದ್ರೂ ಯಾವುದೇ ರೀತಿ ಸೌಲಭ್ಯಗಳನ್ನ ಒದಗಿಸ್ತಿಲ್ಲ. ಸರ್ಕಾರದಿಂದ ಸಿಗಬೇಕಾದ ಸೌಕರ್ಯಗಳನ್ನ ಒದಗಿಸ್ತಿಲ್ಲ. ಹೀಗಾಗಿ ಈ ಬಗ್ಗೆ ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಮನವಿ ಪತ್ರವನ್ನ ಸಲ್ಲಿಸಿದ್ರು. ಈ ವೇಳೆ ಮಹಿಳೆಯರು ಸೇರಿದಂತೆ ನೂರಾರು ಜನರು ಸೇರಿದ್ರು.