ಶಿವು ಉಪ್ಪಾರ ಹತ್ಯೆ ಖಂಡಿಸಿ ಪ್ರತಿಭಟನೆ

497

ಸಿಂದಗಿ: ಗೋ ರಕ್ಷಕ ಶಿವು ಉಪ್ಪಾರ ಹತ್ಯೆಗೆ ಸಂಬಂಧಿಸಿದಂತೆ ಸಿಂದಗಿಯಲ್ಲಿ ಇಂದು ಪ್ರತಿಭಟನೆ ನಡೆಸಲಾಯ್ತು. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ನಗರದಲ್ಲಿ ಮೆರವಣಿಗೆ ನಡೆಸಿ, ಶಿವು ಉಪ್ಪಾರ ಪರ ಘೋಷಣೆಗಳನ್ನ ಕೂಗಲಾಯ್ತು.

ನಗರದ ಬಸವೇಶ್ವರ ಸರ್ಕಲ್ ಬಳಿ ಪ್ರತಿಭಟನೆ ದೃಶ್ಯ

ನಗರದ ಬಸವೇಶ್ವರ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳು, ಶಿವು ಉಪ್ಪಾರ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನಡೆಯುತ್ತಿರುವ ಈ ರೀತಿಯ ಘಟನೆಗಳನ್ನ ತಡೆಯಲು ಸರ್ಕಾರ ಮುಂದಾಗಬೇಕು ಅಂತಾ ಆಗ್ರಹಿಸಿದ್ವು. ಇದಕ್ಕೆ ಸಂಬಂಧಿಸಿದಂತೆ ಮನವಿ ಪತ್ರವನ್ನ ಉಪ ತಹಶೀಲ್ದಾರ್ ಸುರೇಶ ಮ್ಯಾಗೇರಿ ಅವರಿಗೆ ನೀಡಲಾಯ್ತು. ಇದೇ ವೇಳೆ ದೇಣಿಗೆ ಸಂಗ್ರಹಿಸುವ ಮೂಲಕ ಶಿವು ಉಪ್ಪಾರ ಕುಟುಂಬಕ್ಕೆ ತಲುಪಿಸುವ ಕೆಲಸ ಮಾಡಲಾಯ್ತು.




Leave a Reply

Your email address will not be published. Required fields are marked *

error: Content is protected !!