ವಿಜಯಪುರ: ಕರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಲಂ ನಿವಾಸಿಗಳು ಪ್ರತಿಭಟನೆ ನಡೆಸಿದ್ರು. ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ, ಬಿಜಾಪುರ ನಗರ ಸ್ಲಂ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ ನಡೆಸಲಾಯ್ತು.
ಲಾಕ್ ಡೌನ್ ನಿಂದಾಗಿ ಉದ್ಯೋಗಕ್ಕೆ ಕತ್ತರಿ ಬಿದ್ದಿದೆ. ಜೀವನ ನಡೆಸಲು ಕಷ್ಟವಾಗ್ತಿದೆ ಎಂದು ನಗರದ ರಂಗಿನ ಮಸೀದ್ ಕಾಲೋನಿಯಲ್ಲಿ, ಮಹಿಳೆಯರು ಪ್ಲೇಟ್ ಬಾರಿಸುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಹೀಗಾಗಿ ಉದ್ಯೋಗ ಸಿಗುವವರೆಗೂ ಪ್ರತಿ ತಿಂಗಳು 10 ಸಾವಿರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದೇ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯ್ತು.