ಕಬ್ಬು ಬೆಳೆಗಾರರಿಂದ ಸಿಎಂ ಮನೆ ಮುತ್ತಿಗೆ ಯತ್ನ

282

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಬ್ಬು ಬೆಳೆಗಾರರ ಬಾಕಿ ಬಿಲ್, ತೂಕದಲ್ಲಿ ಮೋಸ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದವರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೈಲ್ವೆ ನಿಲ್ದಾಣದಿಂದ ಸಿಎಂ ನಿವಾಸದ ತನಕ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಪೊಲೀಸರು ರೈಲು ನಿಲ್ದಾಣದಲ್ಲೇ ರೈತ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೂ ಮೊದಲೇ ಕಬ್ಬು ಬೆಳೆಗಾರರನ್ನು ವಶಕ್ಕೆ ಪಡೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!