ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ರಾಗಿಗುಡ್ಡ ಗಲಭೆ ಪ್ರಕರಣ ಸಂಬಂಧ ಗುರುವಾರ ಬಿಜೆಪಿ ಪ್ರತಿಭಟನಾ ಸಭೆ ನಡೆಸಿತು. ಈ ವೇಳೆ ಮಾತನಾಡಿದ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಹಿಂದೂ ಸಮಾಜ ಈತನಕ ಕಾನೂನು ಕೈಗೆತ್ತಿಕೊಂಡಿಲ್ಲ. ಹರ್ಷನ ಕೊಲೆಯಾದಾಗ ನಾವು ಮುಸಲ್ಮಾನರ ಬೀದಿಗಳಿಗೆ ಮಚ್ಚು, ಲಾಂಗ್ ಹಿಡಿದುಕೊಂಡು ಹೋಗಿದ್ದರೆ ಕುರಿಗಳ ಹಾಗೇ ಕತ್ತರಿಸುತ್ತಿದ್ದೇವೆ ಎಂದು ಪ್ರಚೋದನಕಾರಿಗೆ ಮಾತನಾಡಿದ್ದಾರೆ.
ಇನ್ನು ರಾಗಿಗುಡ್ಡ ಗಲಭೆಯಲ್ಲಿ ಸಿಎಂ ಮಗ ಯತೀಂದ್ರರನ್ನು, ಡಿಸಿಎಂ ಡಿ.ಕೆ ಶಿವಕುಮಾರ್ ಸಹೋದರ ಸಂಸದ ಡಿ.ಕೆ ಸುರೇಶರನ್ನು ಕೊಲೆ ಮಾಡಿದ್ದರೆ ಸುಮ್ಮನೆ ಇರುತ್ತಿದ್ದರೆ ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಮಾತುಗಳನ್ನು ಆಡಿದ್ದಾರೆ ಎಂದು ಪೊಲೀಸರು ಸುಮೋಟ್ ಕೇಸ್ ದಾಖಲಿಸಿಕೊಂಡಿದ್ದಾರೆ.
ಐಪಿಸಿ ಸೆಕ್ಷನ್ 153 ಎ ಹಾಗೂ 504ರ ಅಡಿಯಲ್ಲಿ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವರ ಭಾಷಣದ ವಿಡಿಯೋ ನೋಡಿದ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿದ್ದರು. ಎಷ್ಟೊಂದು ಪ್ರಚೋದನಕಾರಿಯಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಅಸಮಧಾನ ಹಾರ ಹಾಕಿದ್ದಾರೆ.