ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 20ಕ್ಕೂ ಹೆಚ್ಚು ಜನರ ಬಂಧನವಾಗಿದೆ. ಶುಕ್ರವಾರ ಪರೀಕ್ಷೆ ರದ್ದುಗೊಳಿಸಿ, ಮರು ಪರೀಕ್ಷೆ ನಡೆಸುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಈ ಸಂಬಂಧ ಪ್ರತಿಭಟನೆ, ಉಪವಾಸ ಶುರುವಾಗಲಿವೆ.
ಅಕ್ರಮದ ವಿರುದ್ಧ ದೊಡ್ಡ ಮಟ್ಟದ ಧ್ವನಿ ಎತ್ತಿದ್ದ ವಿಪಕ್ಷಗಳ ಕೆಲ ನಾಯಕರು, ಮರು ಪರೀಕ್ಷೆ ನಡೆಸೋದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಮುಖ ಆರೋಪಿಗಳ ಲಿಂಕ್ ಒಬ್ಬಲ್ಲ ಒಬ್ಬ ರಾಜಕಾರಣಿಯೊಂದಿಗೆ ಸಂಪರ್ಕ ತೋರಿಸುತ್ತಿದೆ. ಹೀಗಾಗಿ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮುಂದೇನಾಗುತ್ತೆ ಅನ್ನೋ ಕುತೂಹಲವಿದೆ.