ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ಪಿಎಸ್ಐಯನ್ನ ಓಓಡಿ ಮೇಲೆ ವರ್ಗಾವಣೆ ಮಾಡಲಾಗಿದೆ. ಚಡಚಣದಿಂದ ವಿಜಯಪುರ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಚಡಚಣ ಪಿಎಸ್ಐ ಮಹದೇವ ಯಲಿಗಾರ ಅವರನ್ನ ವರ್ಗಾವಣೆ ಮಾಡಲಾಗಿದೆ.
ಸಾಮಾಜಿಕ ಅಂತರ ಉಲ್ಲಂಘಿಸಿ ಕಾರ್ಯಕ್ರಮಗಳಲ್ಲಿ ಪಿಎಸ್ಐ ಭಾಗಿಯಾಗಿದ್ದರು. ಮಹಾರಾಷ್ಟ್ರದಲ್ಲಿ ಕರೋನಾ ಸೋಂಕು ಹೆಚ್ಚಾಗಿದ್ದು, ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗ್ತಿದೆ. ಹೀಗಾಗಿ ಪಿಎಸ್ಐ ವಿರುದ್ಧ ದೂರುಗಳು ಬಂದ ಹಿನ್ನೆಲೆ ತನಿಖೆಗೆ ಎಸ್ಪಿ ಅನುಪಮ ಅಗರವಾಲ ಆದೇಶ ನೀಡಿದ್ದಾರೆ.