ಪ್ರಜಾಸ್ತ್ರ ಸುದ್ದಿ
ರಾಯಚೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದ ಹಗರಣದಲ್ಲಿ ಒಬ್ಬೊಬ್ಬರೆ ಪೊಲೀಸ್ ಅಧಿಕಾರಿಗಳು ಸಹ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಎರಡು ದಿನಗಳ ಹಿಂದೆ ಬಂಧನಕ್ಕೆ ಒಳಗಾಗಿದ್ದ ಲಿಂಗಸಗೂರು ಡಿವೈಎಸ್ಪಿ ಮಲ್ಲಿಕಾರ್ಜುನ್ ಸಾಲಿಯನ್ನು ಅಮಾನತು ಮಾಡಲಾಗಿದೆ.
ಪಿಎಸ್ಐ ಅಕ್ರಮದ ಬಗ್ಗೆ ಮಾಹಿತಿ ಪಡೆದಿದ್ದ ಸಾಲಿ, ಕಲಬುರಗಿಯ ಜ್ಞಾನ ಜ್ಯೋತಿ ಶಾಲೆಯ ಕಾರ್ಯದರ್ಶಿ, ಹೆಡ್ ಮಾಸ್ಟರ್ ಗೆ ಬ್ಲ್ಯಾಕ್ ಮಾಡಿದ್ದ. 10 ಲಕ್ಷ ರೂಪಾಯಿ ಪಡೆದಿರುವ ಆರೋಪ ಇದ್ದು, ಸರ್ಕಾರ ಅಮಾನತು ಆದೇಶ ಹೊರಡಿಸಿದೆ.