ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಚಿವ ಸಿ. ಎನ್ ಅಶ್ವಥನಾರಾಯಣ್ ಭಾಗಿಯಾಗಿದ್ದಾರೆ ಅನ್ನೋ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಸಿಐಡಿ ಬಂಧಿಸಿರುವ ದರ್ಶನಗೌಡನನ್ನು, ಈ ಹಿಂದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಆಗ ಸಚಿವ ಅಶ್ವಥನಾರಾಯಣ್ ಹೆಸರು ಹೇಳಿದ್ದ ಅನ್ನೋದು.
ಇದೀಗ ಸಿಐಡಿ ಅಧಿಕಾರಿಗಳು ದರ್ಶನಗೌಡನನ್ನು ಬಂಧಿಸಿದ್ದಾರೆ. ಇದೀಗ ಮತ್ತೆ ವಿಪಕ್ಷಗಳು ಸಚಿವರ ರಾಜೀನಾಮೆಗೆ ಒತ್ತಾಯಿಸಿವೆ. ಆದರೆ, ನಾನು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲವೆಂದು ಸಚಿವ ಅಶ್ವಥನಾರಾಯಣ್ ಹೇಳಿದ್ದಾರೆ.