ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ವರದಿ ಸಲ್ಲಿಕೆ

138

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಜುಲೂ 21ರಂದು ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಇಂದು ಸಲ್ಲಿಸಲಾಗಿದೆ. ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಇಂದು ಸಲ್ಲಿಸಿದರು.

ಕಳೆದ ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ನಡೆದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬೃಹತ್ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತು. ಈ ಪ್ರಕರಣದಲ್ಲಿ ರಾಜ್ಯದ ಇತಿಹಾಸದಲ್ಲಿ ಐಪಿಎಸ್ ಮಟ್ಟದ ಅಧಿಕಾರಿಯೊಬ್ಬರು ಬಂಧನಕ್ಕೆ ಒಳಗಾದರು. ಸರ್ಕಾರಕ್ಕೆ ದೊಡ್ಡ ಡ್ಯಾಮೇಜ್ ಮಾಡಿತು.

ಸಾಲು ಸಾಲು ಪೊಲೀಸ್ ಅಧಿಕಾರಿಗಳು, ರಾಜಕೀಯ ಮುಖಂಡರು ಬಂಧನವಾದರು. ಹೀಗಾಗಿ ಕೋರ್ಟ್ ಮೆಟ್ಟಿಲು ಏರಿ ನೇಮಕಾತಿ ಪ್ರಕ್ರಿಯೆಯೇ ರದ್ದಾಯ್ತು. ಹೊಸದಾಗಿ ಪರೀಕ್ಷೆ ನಡೆಸಲು ಕೋರ್ಟ್ ತೀರ್ಪು ನೀಡಿತು. ಜೊತೆಗೆ ಸಮ್ರಗ ತನಿಖೆಗೆ ಆದೇಶಿಸಿತ್ತು. ಈಗ ಆಯೋಗದ ವರದಿ ಸಲ್ಲಿಕೆಯಾಗಿದ್ದು, ಯಾವೆಲ್ಲ ಸತ್ಯ ಹೊರ ಬರುತ್ತೆ ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!