ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ: ಸಚಿವ ಜ್ಞಾನೇಂದ್ರ

187

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸದನದಲ್ಲಿ ಹೇಳಿದ್ದಾರೆ. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅರವಿಂದ್ ಕುಮಾರ್ ಅರಳಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಪರೀಕ್ಷಾ ಕೊಠಡಿಯಲ್ಲಿ ಬ್ಲೂಟೂತ್ ಬಳಕೆಯಾಗಿಲ್ಲ. ಇನ್ನು ಹೈದ್ರಾಬಾದ್ ಕರ್ನಾಟಕ ಭಾಗದವರಿಗೆ ಮೀಸಲಾತಿ ಸಿಕ್ಕಿಲ್ಲವೆಂದು ಆ ಭಾಗದ ಸದಸ್ಯರು ಆಕ್ಷೇಪಿಸಿದಾಗ, ಸಿಎಂ ನೇಮಕಾತಿ ಪಟ್ಟಿಯನ್ನು ತಡೆ ಹಿಡಿದಿದ್ದಾರೆ. ಅವ್ಯವಹಾರ ನಡೆದಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಪಾಲಿನಲ್ಲಿ ಅನ್ಯಾಯವಾಗಿರುವುದನ್ನು ಪರಿಶೀಲನೆ ನಡೆಸಿದ ಬಳಿಕ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದರು.




Leave a Reply

Your email address will not be published. Required fields are marked *

error: Content is protected !!