ಪಿಎಸ್ಐ ನೇಮಕಾತಿ ಹಗರಣ: ಹಿರಿಯ ಅಧಿಕಾರಿ ಎತ್ತಂಗಡಿ

467

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ, ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆಂತರಿಕ ದಳದ ಎಡಿಪಿಯಾಗಿ ಇವರನ್ನು ವರ್ಗಾವಣೆ ಮಾಡಲಾಗಿದೆ.

ಅಪರಾಧ ಮತ್ತು ತಾಂತ್ರಿಕ ಸೇವೆಗಳ ಎಡಿಜಿಪಿ ಆಗಿರುವ ಆರ್.ಹಿತೇಂದ್ರ್ ಅವರಿಗೆ ಹೆಚ್ಚುವರಿಯಾಗಿ ನೇಮಕಾತಿ ವಿಭಾಗದ ಜವಾಬ್ದಾರಿ ನೀಡಲಾಗಿದೆ. ಎಡಿಜಿಪಿ ಅಂಡರ್ ನಲ್ಲಿ ಪಿಎಸ್ಐ ನೇಮಕಾತಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಆರೋಪಿಸಿದ್ದರು. ಈ ಬಗ್ಗೆ ನಾನು ಹೇಳಿದ್ದೆ, ಈಗ ವರ್ಗಾವಣೆಯಾಗಿದೆ. ಎಲ್ಲೋ ಒಂದು ಕಡೆ ಸರ್ಕಾರ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!