ಪೌಲ್ ಮಂಪರು ಪರೀಕ್ಷೆ ಆಗಲಿ: ಸಿದ್ದರಾಮಯ್ಯ

243

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಅನುಮಾನಗಳಿವೆ. ಅದೆಲ್ಲ ಹೊರಗೆ ಬರಬೇಕು ಅಂದರೆ ಅಮೃತ್ ಪೌಲ್ ಮಂಪರು ಪರೀಕ್ಷೆ ನಡೆಸಬೇಕು. ಪೌಲ್ ಬರೆದ ಡೈರಿ ಬಗ್ಗೆಯೂ ತನಿಖೆಯಾಗಬೇಕು. ಯಾವುದೇ ಕಾರಣಕ್ಕೂ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು ಎಂದರು.




Leave a Reply

Your email address will not be published. Required fields are marked *

error: Content is protected !!