ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ ಪರಾರಿಯಾಗಿದ್ದಾನೆ. ಸಿಐಡಿ ಅಧಿಕಾರಿಯನ್ನು ತಳ್ಳಿ ಕಳೆದ ರಾತ್ರಿ ಪರಾರಿಯಾಗಿದ್ದಾನೆ. ಈ ಸಂಬಂಧ ದೂರು ದಾಖಲಾಗಿದೆ.
ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ನಿವಾಸದಿಂದ ಎಸ್ಕೇಪ್ ಆಗಿದ್ದಾನೆ. ಇತನ ವಿರುದ್ಧ ತುಮಕೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ಆತನನ್ನು ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಕಲಬುರಗಿಗೆ ಆಗಮಿಸಿದ್ದರು. ಈ ವೇಳೆ ಅಧಿಕಾರಿಯನ್ನು ತಳ್ಳಿ ಪರಾರಿಯಾಗಿದ್ದು, ಸಿಐಡಿ ವಿಭಾಗದ ಪಿಎಸ್ಐ ಆನಂದ ಕಲಬುರ್ಗಿ ಅಶೋಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.