ಪಿಯು ಫಲಿತಾಂಶ: ವಿಜಯಪುರ ವಿದ್ಯಾರ್ಥಿಗಳ ಸಾಧನೆ

752

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಮಂಗಳವಾರ ಬಂದಿದೆ. ಜಿಲ್ಲಾವಾರು ವಿಭಾಗದಲ್ಲಿ ಗುಮ್ಮಟನಗರಿ ಕೊನೆಯ ಸ್ಥಾನದಲ್ಲಿ ಬಂದಿದ್ರೂ, ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಜಿಲ್ಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ನಗರದ ತುಂಗಳ ಪಿಯು ಕಾಲೇಜಿನ ವಿದ್ಯಾರ್ಥಿನಿ ಸುರಭಿ ಶಶಿಕಾಂತ ಹತ್ತೂರೆ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶಕಡ 93.50ರಷ್ಟು ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕುಟುಂಬಸ್ಥರು, ಕಾಲೇಜಿನ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.

ಇನ್ನು ನಗರದ ಮಹೇಶ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಮರ್ಥ ಹತ್ತೂರೆ ಶೇಕಡ 91.84ರಷ್ಟು ಅಂಕ ಪಡೆದಿದ್ದಾನೆ. ವಿದ್ಯಾರ್ಥಿ ಸಮರ್ಥ ಸಾಧನೆಗೆ ಹೆತ್ತವರು, ಕಾಲೇಜಿನ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.




Leave a Reply

Your email address will not be published. Required fields are marked *

error: Content is protected !!