ಪ್ರಜಾಸ್ತ್ರ ಸುದ್ದಿ
ನವದೆಹಲಿ: ಪುಲ್ವಾಮಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಬರೋಬ್ಬರಿ 40 ಯೋಧರು ಹುತಾತ್ಮರಾಗಿದ್ದಾರೆ. ಈ ದಾಳಿಯ ಹಿಂದೆ ಪ್ರಧಾನಿ ಮೋದಿಯ ಕೈವಾಡ ಇದೆ ಎಂದು ಕಾಂಗ್ರೆಸ್ ನಾಯಕ ಡಾ.ಉದಿತ್ ರಾಜ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಉದಿತ್ ರಾಜ್, ಪ್ರಧಾನಿ ಮೋದಿ ಈಗ ನೌಟಂಕಿ ಮಾಡುತ್ತಿದ್ದಾರೆ. ಪುಲ್ವಾಮಾ ದಾಳಿ ನಡೆದಾಗ ಎಲ್ಲಿ ಹೋಗಿತ್ತು ಎಂದು ಕೇಳಿದ್ದಾರೆ. ಪಂಜಾಬ್ ನಲ್ಲಿ ಇತ್ತೀಚೆಗೆ ನಡೆದ ಭದ್ರತಾ ಲೋಪದ ಬಗ್ಗೆ ದೊಡ್ಡ ಮಟ್ಟದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ನಡೆದಿದೆ.