ಪುನೀತ್ ಫೌಂಡೇಷನ್ ಸಹಾಯಾರ್ಥ ನಡೆಯಬೇಕಿದ್ದ ಕಾರ್ಯಕ್ರಮ ರದ್ದು

194

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹೃದಯಾಘಾತದಿಂದ ಕಳೆದೊಂದು ತಿಂಗಳ ಹಿಂದೆ ನಿಧನರಾದ ನಟ ಪುನೀತ್ ರಾಜಕುಮಾರ್ ಅವರ ಫೌಂಡೇಷನ್ ಸಹಾಯಾರ್ಥ ಇಂದು ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿದೆ. ಕಾಮಿಡಿಯನ್ ಮುನಾವರ್ ಫಾರೂಕಿಯಿಂದ ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿದೆ.

ನಗರದ ಗುಡ್ ಷಫರ್ಡ್ ಆಡಿಟೋರಿಯಮ್ ನಲ್ಲಿ ನಡೆಯಬೇಕಿದ್ದ ಶೋಗೆ ಪೊಲೀಸರು ಅನುಮತಿ ನೀಡಿಲ್ಲ. ಮುನಾವರ್ ಕಾರ್ಯಕ್ರಮಗಳಿಂದ ನಗರದಲ್ಲಿ ಶಾಂತಿ ಕದಡುವ ಸಾಧ್ಯತೆಯಿದೆ ಅನ್ನೋ ಮಾತುಗಳು ಕೇಳಿ ಬಂದಿದ್ದು, ಹೀಗಾಗಿ ಪೊಲೀಸರು ಒಪ್ಪಿಗೆ ನೀಡಿಲ್ಲ. ಕಾರ್ಯಕ್ರಮ ರದ್ದಾಗಿರುವ ಕುರಿತು ಟ್ವೀಟರ್ ಮೂಲಕ ಮುನಾವರ್ ಹಂಚಿಕೊಂಡಿದ್ದು, ಅನ್ಯಾಯ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!