ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಮನಗರ ಜಿಲ್ಲೆಯ ಸಾತನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದ್ರೀಸ್ ಪಾಷಾ ಅನ್ನೋ ವ್ಯಕ್ತಿಯ ಕೊಲೆ ಪ್ರಕರಣ ಸಂಬಂಧ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಆತನ ಗ್ಯಾಂಗ್ ರಾಜಸ್ಥಾನದ ಬನಸ್ವಾರ ಹತ್ತಿರ ಬಂಧಿಸಲಾಗಿದೆ.
ಕಳೆದ ಶನಿವಾರ ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಗ್ಯಾಂಗ್ ನ್ನು ಬಧುವಾರ ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಲೈವ್ ಬಂದು ಮಾಜಿ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ. ಇದೀಗ ಐವರನ್ನು ಬಂಧಿಸಲಾಗಿದೆ.