ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್, ಕರ್ನಾಟಕ ರತ್ನ ದಿ.ಡಾ.ಪುನೀತ್ ರಾಜಕುಮಾರ್ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಿಂದಿನ ಸರ್ಕಾರ ಆಚರಣೆ ಕೈಗೊಳ್ಳದಿದ್ದರೂ ನಾವು ಮಾಡುತ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಪುನೀತ್ ರಾಜಕುಮಾರ್ ಡಿಜಿಟಲ್ ಪುತ್ಥಳಿ ಬಿಡುಗಡೆಗೊಳಿಸಿ ಮಾತನಾಡಿದರು. ಡಾ.ರಾಜಕುಮಾರ್ ಕುಟುಂಬದೊಂದಿಗೆ ಬಹಳ ಒಡನಾಟವಿದೆ. ಪುನೀತ್ ನನಗೆ ತುಂಬಾ ಗೌರವ ನೀಡುತ್ತಿದ್ದರು. ಡಾ.ರಾಜಕುಮಾರ್ ಸ್ಮಾರ ಪುನರಾಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ ಎಂದರು.
ಮಾರ್ಚ್ 17 ಪುನೀತ್ ರಾಜಕುಮಾರ್ ಅವರ ಜನ್ಮ ದಿನವಾಗಿದೆ. ಅಕ್ಟೋಬರ್ 29, 2021ರಂದು ಹೃದಯಾಘಾತದಿಂದಾಗಿ ಅಕಾಲಿಕ ನಿಧನ ಹೊಂದಿದರು.