ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್ ನಿಧನರಾಗಿ ಇಂದಿಗೆ 12 ದಿನಗಳು ಕಳೆದಿವೆ. ಸೋಮವಾರ ಕುಟುಂಬಸ್ಥರು 11ನೇ ದಿನದ ಕಾರ್ಯ ಮಾಡಿದ್ದಾರೆ. ಇಂದು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಗುತ್ತಿದೆ. ಇದಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾಂಸಹಾರ ಹಾಗೂ ಸಸ್ಯಹಾರದ ವ್ಯವಸ್ಥೆ ಮಾಡಿದ್ದು ಏಕಕಾಲದಲ್ಲಿ 5 ಸಾವಿರ ಜನ ಕುಳಿತುಕೊಳ್ಳುವಷ್ಟು ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. 11.30ರಿಂದ ಊಟ ಶುರುವಾಗಲಿದೆ.