ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಬಿಬಿಎಂಪಿ ಆವರಣದಲ್ಲಿ ಪವರ್ ಸ್ಟಾರ್ ನಟ ಡಾ.ಪುನೀತ್ ರಾಜಕುಮಾರ್ ಅವರ ಮೂರ್ತಿಯನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಹಿರಿಯ ನಿರ್ದೇಶಕ ದೊರೆ ಭಗವಾನ್, ಹಿರಿಯ ನಟ ಹೊನವಳ್ಳಿ ಕೃಷ್ಣ, ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ಸೇರಿ 12 ಸಾಧಕರಿಗೆ ಪುನೀತ್ ರಾಜಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪುನೀತ್ ಪುತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಸಹೋದರ ರಾಘವೇಂದ್ರ ರಾಜಕುಮಾರ್ ಸೇರಿ ಅನೇಕರು ಹಾಜರಿದ್ದರು.