ಪಂಜಾಬ್ ಮಾಜಿ ಸಿಎಂ ಬಾದಲ್ ನಿಧನ, 2 ದಿನ ಶೋಕಾಚರಣೆ

99

ಪ್ರಜಾಸ್ತ್ರ ಸುದ್ದಿ

ಚಂಡೀಗಢ: ಪಂಜಾಬ್ ಮಾಜಿ ಸಿಎಂ ಪ್ರಕಾಶ ಸಿಂಗ್ ಬಾದಲ್ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಇಂದು ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನಿ ಮೋದಿ ಅಂತಿಮ ದರ್ಶನ ಪಡೆಯಲಿದ್ದಾರೆ. ಇಂದು ಹಾಗೂ ನಾಳೆ 2 ದಿನ ರಾಷ್ಟ್ರೀಯ ಶೋಕಾಚರಣೆ ನಡೆಸಲಾಗುತ್ತಿದೆ.

95 ವರ್ಷದ ಬಾದಲ್ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗುರುವಾರ ಅವರ ಹುಟ್ಟೂರಾದ ಬಾದಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಜಕೀಯ ಗಣ್ಯರು ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

ಶಿರೋಮಣಿ ಅಕಾಲಿದಳದ ಹಿರಿಯ ನಾಯಕರಾಗಿದ್ದ ಪ್ರಕಾಶ್ ಸಿಂಗ್ ಬಾದಲ್ 5 ಬಾರಿ ಮುಖ್ಯಮಂತ್ರಿಯಾಗಿದ್ದರು. 11 ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೀರ್ತಿ ಅವರದು. 1957ರಿಂದ ಲಂಬಿ ವಿಧಾನಸಭಾ ಕ್ಷೇತ್ರದಲ್ಲಿ ಸತತ 10 ಬಾರಿ ಸ್ಪರ್ಧಿಸಿದ್ದರು. 94ನೇ ವಯಸ್ಸಿನಲ್ಲಿಯೂ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದರು.

1977ರಲ್ಲಿ ಮೂರಾರ್ಜಿ ದೇಸಾಯಿ ಅವರ ಜನತಾ ಪಕ್ಷದ ಸರ್ಕಾರದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾಗಿದ್ದರು. ಆದರೆ ನಾಲ್ಕೇ ತಿಂಗಳಿಗೆ ರಾಜೀನಾಮೆ ನೀಡಿ ವಾಪಸ್ ರಾಜ್ಯ ರಾಜಕಾರಣಕ್ಕೆ ಬಂದರು.




Leave a Reply

Your email address will not be published. Required fields are marked *

error: Content is protected !!