ಪ್ರಜಾಸ್ತ್ರ ಸುದ್ದಿ
ಚಂಡೀಗಢ: ಪಂಜಾಬ್ ವಿಧಾನಸಭೆ ಚುನಾವಣೆಯ ಕಣ ರಂಗೇರುತ್ತಿದೆ. ಇಂದು ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿದೆ. ಸಹಜವಾಗಿ ನಿರೀಕ್ಷೆಯಂತೆ ಹಾಲಿ ಸಿಎಂ ಚರಣ್ ಜೀತ್ ಸಿಂಗ್ ಚನ್ನಿ ಅವರನ್ನು ಸಿಎಂ ಅಭ್ಯರ್ಥಿಯನ್ನು ಎಂದು ಘೋಷಿಸಿದೆ.
ಲುಧಿಯಾನದಲ್ಲಿ ರಾಹುಲ್ ಗಾಂಧಿ ವರ್ಚುವಲ್ ರ್ಯಾಲಿಯ ಮೂಲಕ ಸಿಎಂ ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೆಲವು ನಾಯಕರು ಮಾತ್ರ ಸಮಾಜಕ್ಕಾಗಿ ಹೋರಾಡುತ್ತಾರೆ. ಇತರರು ತಮಗಾಗಿ ಹೋರಾಡುತ್ತಾರೆ. ಸಿದು, ಚಿನ್ನಿ, ಜಾಖರ್ ಎಲ್ಲರೂ ಕಷ್ಟು ಪಡುತ್ತಿದ್ದಾರೆ ಎಂದು ಹೇಳಿದ್ದಾರೆ.