ಸಿಂದಗಿ: ಹೊರ ರಾಜ್ಯಗಳಿಂದ ಬಂದಂತ ವಲಸೆ ಕಾರ್ಮಿಕರನ್ನ ಕ್ವಾರಂಟೈನ್ ಮಾಡಲು ಸರ್ಕಾರಿ ಶಾಲೆಯಲ್ಲಿ ಅವಕಾಶ ಮಾಡಿಕೊಡಲು ನಿರಾಕರಿಸಲಾಗಿದೆ. ಹೀಗಾಗಿ ತಾಲೂಕಿನ ದೇವರನಾವದಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರನ್ನ ಅಮಾನತು ಮಾಡಲಾಗಿದೆ.
ಮುಖ್ಯಶಿಕ್ಷಕ ಅಶೋಕ ರಡ್ಡೇರ ಅವರನ್ನ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಪ್ರಸನ್ನಕುಮಾರ ಆದೇಶ ಹೊರಡಿಸಿದ್ದಾರೆ. ಇನ್ನು ಅಮಾನತು ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲವೆಂದು ಆದೇಶದಲ್ಲಿ ತಿಳಿಸಿದ್ದಾರೆ.