ಸಮಾಜದಲ್ಲಿ ಪ್ರಶ್ನಿಸುವುದು ಎಲ್ಲರ ಹೊಣೆ: ಪ್ರಕಾಶ್ ರಾಜ್

195

ಪ್ರಜಾಸ್ತ್ರ ಸುದ್ದಿ

ಮೈಸೂರು: ಸಮಾಜದಲ್ಲಿ ಪ್ರಶ್ನಿಸುವುದು ಎಲ್ಲರ ಹೊಣೆ. ಅದು ನಮ್ಮ ಹಕ್ಕು ಕೂಡಾ. ಅದನ್ನು ತಪ್ಪು ಎನ್ನುವುದು ಸರಿಯಲ್ಲ. ನಾವು ಕೇಳಿದ್ದು ತಪ್ಪಾಗಿದ್ದಲ್ಲಿ ಸರಿಪಡಿಸಿ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು.

ಜಿಲ್ಲಾ ಪತ್ರಕರ್ತ ಸಂಘ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಣದಲ್ಲಿ ಜಸ್ಟ್ ಆಸ್ಕಿಂಗ್ ಮೂಲಕ ಪ್ರಶ್ನಿಸುತ್ತಲೇ ಇರುತ್ತೇನೆ. ಹೋರಾಟ ಎಂದರೆ ಬರೀ ಬೀದಿಗಿಳಿಯುವುದಷ್ಟೇ ಅಲ್ಲ. ಹಿಂದೆ ನಿಂತು ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ನನ್ನ ಧ್ವನಿ ಅಡಿಗಿಸಲು ಸಾಧ್ಯವಿಲ್ಲ ಎಂದರು.

ನಾನು ಯಾವುದೇ ಭಾಷೆ, ಊರಿಗೆ ಸೀಮಿತವಾಗಿಲ್ಲ. ಕಲಾವಿದರ ರಾಜಕೀಯ, ವೈಯಕ್ತಿಕ ನಿಲುವು ಆಧರಿಸಿ ಸಿನಿಮಾ ನಿಷೇಧಿಸುವ ಅಭಿಯಾನ ಹೆಚ್ಚುತ್ತಿವೆ. ಇದು ಕಲಾವಿದನ ಅನ್ನ ಕಸಿಯುವ ಬೆಳೆವಣಿಗೆ. ಇಂತಹದ್ದಕ್ಕೆ ನಾನು ಹೆದರುವುದಿಲ್ಲವೆಂದು ಹೇಳಿದರು.




Leave a Reply

Your email address will not be published. Required fields are marked *

error: Content is protected !!