ಮಹಾತ್ಮ ಗಾಂಧಿ ಮರಿಮೊಮ್ಮಗ ಬಂಧನ, ಬಿಡುಗಡೆ

306

ಪ್ರಜಾಸ್ತ್ರ ಸುದ್ದಿ

ಮುಂಬೈ: ಭಾರತ ಬಿಟ್ಟು ತೊಲಗಿ ಚಳವಳಿಯ ಸ್ಮರಣಾರ್ಥ ನಡೆದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ರಾಷ್ಟ್ರಪತಿ, ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಅವರನ್ನು ಬುಧವಾರ ಬಂಧಿಸಿ ಬಿಡುಗಡೆ ಮಾಡಲಾಗಿದೆ.

ಈ ಕುರಿತು ತುಷಾರ್ ಗಾಂಧಿ ಅವರು ಟ್ವೀಟ್ ನಲ್ಲಿ ಬರೆದಿದ್ದಾರೆ. ಭಾರತ ಬಿಟ್ಟು ತೊಲಗಿ ಚಳವಳಿ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹೊರಟಿದ್ದ ನನ್ನನ್ನು ಸ್ವತಂತ್ರ ಭಾರತದಲ್ಲಿ ಮೊದಲ ಬಾರಿಗೆ ಪೊಲೀಸರು ಬಂಧಿಸಿದ್ದಾರೆ. ಐತಿಹಾಸಿಕ ದಿನದಂದು ನನ್ನ ಮುತ್ತಜ್ಜ, ಮುತ್ತಜ್ಜಿ ಅವರೂ ಬ್ರಿಟಿಷರಿಂದ ಬಂಧನಕ್ಕೊಳಗಾಗಿದ್ದರು ಎಂಬ ಹೆಮ್ಮೆ ಇದೆ ಅಂತಾ ಹೇಳಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿ, ಕಾರ್ಯಕ್ರಮಕ್ಕೆ ಹೋಗಲು ಅನುಮತಿ ಸಿಕ್ಕಿದೆ. ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದೇನೆ. ಕ್ರಾಂತಿ ಅಮರವಾಗಲಿ ಎಂದರು. ಅಲ್ಲದೇ ನಮ್ಮ ಶಾಂತಿ, ಅಹಿಂಸೆಗೆ ಈ ಸರ್ಕಾರ ಬೆದರುತ್ತಿರುವುದು ಯಾಕೆ ಎಂದು ಬರೆಯುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!