ಖರ್ಗೆ ಎಷ್ಟು ಕೊಟ್ಟು ಎಐಸಿಸಿ ಅಧ್ಯಕ್ಷರಾಗಿದ್ದಾರೆ: ಆರ್.ಅಶೋಕ್

123

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ನೂತನ ವಿಪಕ್ಷ ನಾಯಕ ಆರ್.ಅಶೋಕ್, ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಲು ಎಷ್ಟು ಕೋಟಿ ಕೊಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ ಸಚಿವರಾಗಲು ಎಷ್ಟು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ವಿಜಯೇಂದ್ರರನ್ನು ಹೈಕಮಾಂಡ್ ಅಳೆದು ತೂಗಿ ನೇಮಕ ಮಾಡಿದೆ. ಅವರ ಮಾತಿನಿಂದ ಕಾಂಗ್ರೆಸ್ ಗೆ ನಡಕ ಶುರುವಾಗಿದೆ. ಕೊಟ್ಟು ಹೋಗುವ ಸಂಸ್ಕೃತಿ ಬಿಜೆಪಿಯಲ್ಲಿ ಇಲ್ಲ. ಅದು ಇರುವುದು ಕಾಂಗ್ರೆಸ್ ನಲ್ಲಿ. ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಕಾಂಗ್ರೆಸ್ ರಾಜ್ಯ ಅಭಿವೃದ್ಧಿ ದುಡ್ಡನ್ನು ತೆಲಂಗಾಣಕ್ಕೆ ಖರ್ಚು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!