ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಏಪ್ರಿಲ್ 9ರಂದು ಕೋಲಾರದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ನ ಸತ್ಯಮೇವ ಜಯತೆ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಏಪ್ರಿಲ್ 9ರ ಕಾರ್ಯಕ್ರಮ ಏಪ್ರಿಲ್ 16ಕ್ಕೆ ಎಂದು ಹೇಳಲಾಗುತ್ತಿದೆ.
ಈ ಮೊದಲು ಏಪ್ರಿಲ್ 5ರಂದು ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿತ್ತು. ನಂತರ ಅದು ಏಪ್ರಿಲ್ 9 ಆಯಿತು. ಈಗ ಮತ್ತೆ ಮುಂದಕ್ಕೆ ಹೋಗಿದೆ. ಕೋಲಾರ ಲೋಕಸಭಾ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದ ವೇಳೆ ಮೋದಿ ಉಪನಾಮದ ವಿಚಾರವಾಗಿ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇದರಿಂದಾಗಿ ಲೋಕಸಭಾ ಸ್ಥಾನ ಅನರ್ಹಗೊಂಡಿದೆ.
ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಇದೆ ವಿಚಾರವಾಗಿ ಕೋಲಾರದಲ್ಲಿಯೇ ಸತ್ಯಮೇವ ಜಯತೆ ಕಾರ್ಯಕ್ರಮ ಮಾಡುವ ಮೂಲಕ, ಬಿಜೆಪಿ ಸರ್ಕಾರದ ವಿರುದ್ಧ ರಣಕಹಳೆ ಊದಲು ಕೈ ಪಡೆ ಸಜ್ಜಾಗಿದೆ.