ರಾಹುಲ್ ಗಾಂಧಿ ಕಾರ್ಯಕ್ರಮ ಮತ್ತೆ ಮುಂದೂಡಿಕೆ!

96

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಏಪ್ರಿಲ್ 9ರಂದು ಕೋಲಾರದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ನ ಸತ್ಯಮೇವ ಜಯತೆ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಏಪ್ರಿಲ್ 9ರ ಕಾರ್ಯಕ್ರಮ ಏಪ್ರಿಲ್ 16ಕ್ಕೆ ಎಂದು ಹೇಳಲಾಗುತ್ತಿದೆ.

ಈ ಮೊದಲು ಏಪ್ರಿಲ್ 5ರಂದು ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿತ್ತು. ನಂತರ ಅದು ಏಪ್ರಿಲ್ 9 ಆಯಿತು. ಈಗ ಮತ್ತೆ ಮುಂದಕ್ಕೆ ಹೋಗಿದೆ. ಕೋಲಾರ ಲೋಕಸಭಾ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದ ವೇಳೆ ಮೋದಿ ಉಪನಾಮದ ವಿಚಾರವಾಗಿ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇದರಿಂದಾಗಿ ಲೋಕಸಭಾ ಸ್ಥಾನ ಅನರ್ಹಗೊಂಡಿದೆ.

ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಇದೆ ವಿಚಾರವಾಗಿ ಕೋಲಾರದಲ್ಲಿಯೇ ಸತ್ಯಮೇವ ಜಯತೆ ಕಾರ್ಯಕ್ರಮ ಮಾಡುವ ಮೂಲಕ, ಬಿಜೆಪಿ ಸರ್ಕಾರದ ವಿರುದ್ಧ ರಣಕಹಳೆ ಊದಲು ಕೈ ಪಡೆ ಸಜ್ಜಾಗಿದೆ.




Leave a Reply

Your email address will not be published. Required fields are marked *

error: Content is protected !!