ಪ್ರಜಾಸ್ತ್ರ ಸುದ್ದಿ
ಅಸ್ಸಾಂ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದೆ. ಸೋಮವಾರ ಅಸ್ಸಾಂನ ಹೈಬೋರಗಾಂವ್ ನಲ್ಲಿನ ಶಂಕರದೇವ ಸತ್ರ ದೇವಸ್ಥಾನಕ್ಕೆ ತೆರಳಿದ್ದರು. ಆದರೆ, ದೇವಸ್ಥಾನಕ್ಕೆ ಪ್ರವೇಶಿಸದಂತೆ ತಡೆಯಲಾಗಿದೆ.
ಯಾತ್ರೆ ಪ್ರಾರಂಭಿಸುವುದಕ್ಕೂ ಮೊದಲು ಶಂಕರದೇವ ಸತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ತೀರ್ಮಾನಿಸಲಾಗಿತ್ತು. ಅದರಂತೆ ದೇವಸ್ಥಾನಕ್ಕೆ ಬಂದವರನ್ನು, ದೇವಸ್ಥಾನ ಆಡಳಿತ ಮಂಡಳಿ, ಅಧಿಕಾರಿಗಳು ತಡೆದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದೇವಸ್ಥಾನಕ್ಕೆ ಪ್ರವೇಶವೆಂದು ಹೇಳಲಾಗಿದೆ. ಈ ವೇಳೆ ರಾಹುಲ್ ಗಾಂಧಿ ಇದನ್ನು ಪ್ರಶ್ನಿಸಿ ಧರಣಿ ನಡೆಸಿದ್ದಾರೆ.
ದೇವಸ್ಥಾನಕ್ಕೆ ಯಾರು, ಯಾವಾಗ ಭೇಟಿ ನೀಡಬೇಕೆಂದು ಪ್ರಧಾನಿ ನಿರ್ಧರಿಸುತ್ತಾರೆಯೇ ಎಂದು ವಾಗ್ದಾಳಿ ನಡೆಸಿದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡದೆ ಇರುವುದು ನಾಚಿಕೇಗಡಿನ ಸಂಗತಿ ಎಂದು ಅಸ್ಸಾಂ ಸಿಎಂ ಹಾಗೂ ಪ್ರಧಾನಿ ವಿರುದ್ಧ ಕಾಂಗ್ರೆಸ್ ಸೇವಾದಳದ ಮುಖ್ಯಸ್ಥ ಲಾಲ್ಜಿ ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.