ಪ್ರಜಾಸ್ತ್ರ ಸುದ್ದಿ
ಕೇರಳ: ವಯನಾಡಿನಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯನ್ನು ಧ್ವಂಸ ಮಾಡಲಾಗಿದೆ. ಎಸ್ಎಫ್ಐ ಸಂಘಟನೆ ಕಾರ್ಯಕರ್ತತರು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ದೇ ಕಚೇರಿಯಲ್ಲಿದ್ದವರ ಮೇಲೂ ಹಲ್ಲೆ ಮಾಡಲಾಗಿದೆ. ಈ ಬಗ್ಗೆ ಎಲ್ಲಡೆಯಿಂದ ಆಕ್ರೋಶ ವ್ಯಕ್ತವಾಗಿದ್ದು, ಇಂತಹ ಗೂಂಡಾಗಳ ವಿರುದ್ಧ ಮುಖ್ಯಮಂತ್ರಿ ಪಿಣಿರಾಯ್ ವಿಜಯನ್ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಇದೊಂದು ಪೂರ್ವನಿಯೋಜಿತ ದಾಳಿಯಾಗಿದೆ. ಎಸ್ಎಫ್ಐ ಗೂಂಡಾಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.