ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ 13ನೇ ದಿನಕ್ಕೆ ಕಾಲಿಟ್ಟಿದೆ. ಮೊಳಕಾಲ್ಮುರಿನ ರಾಮಪುರದಿಂದ ಪಾದಯಾತ್ರೆ ಸಾಗಿದೆ. ಈ ವೇಳೆ ರಾಮಾಯಣ ಪಾತ್ರಧಾರಿಗಳ ಜೊತೆಗೆ ರಾಹುಲ್ ಗಾಂಧಿ ಹೆಜ್ಜೆ ಹಾಕಿದ್ದಾರೆ.
ರಾಮ, ಲಕ್ಷ್ಮಣ, ಹನುಮಂತ ಸೇರಿ ಇತರೆ ಪಾತ್ರಧಾರಿಗಳೊಂದಿಗೆ ಪಾದಯಾತ್ರೆ ನಡೆಸಿದರು. ಶನಿವಾರ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಸಮಾವೇಶ ನಡೆಯಲಿದೆ. ಇದರಲ್ಲಿ 3-4 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಈಗಾಗ್ಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.