ಎಐಸಿಸಿ ಸಾರಥಿ ಯಾರು?

417
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ನಲ್ಲಿ ಇದೀಗ ರಾಜೀನಾಮೆ ಹಗ್ಗಜಗ್ಗಾಟ ನಡೆದಿದೆ.

ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಗೆ ಮುಂದಾಗಿದ್ದಾರೆ. ತಮ್ಮ ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎನ್ನುತ್ತಿದ್ದಾರೆ.
ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿಂದತೆ ಕಾಂಗ್ರೆಸ್ ನ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದಾರೆ. ಅಹ್ಮದ್ ಪಟೇಲ್, ಕೆ.ಸಿ ವೇಣುಗೋಪಾಲ್ ಸೇರಿದಂತೆ ಹಿರಿಯ ನಾಯಕರ ಜೊತೆ ಚರ್ಚಿಸಿದ ರಾಹುಲ್, ತಮ್ಮ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಅನ್ನೋ ಮಾತುಗಳನ್ನ ಹೇಳ್ತಿದ್ದಾರೆ ಅನ್ನೋದು ತಿಳಿದು ಬಂದಿದೆ.
ರಾಹುಲ್ ಅವರ ಈ ನಿರ್ಧಾರ ಒಪ್ಪಿಕೊಳ್ಳದ ನಾಯಕರು, ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಿರಿ ಅಂತಾ ಹೇಳ್ತಿದ್ದಾರೆ. ಹೀಗಾಗಿ ರಾಹುಲ್ ಮತ್ತು ಕಾಂಗ್ರೆಸ್ ನ ಹಿರಿಯ ನಾಯಕರ ನಡುವೆ ರಾಜೀನಾಮೆ ಜಟಾಪಟಿ ನಡೆದಿದೆ. ಒಂದು ವೇಳೆ ರಾಹುಲ್ ಗಾಂಧಿ ರಾಜೀನಾಮೆ ಸ್ವೀಕೃತವಾದ್ರೆ, ಎಐಸಿಸಿ ಮುಂದಿನ ಸಾರಥಿ ಯಾರು ಅನ್ನೋ ಪ್ರಶ್ನೆ ಇದೀಗ ಎಲ್ಲರಲ್ಲಿ ಮೂಡಿದೆ.


TAG


Leave a Reply

Your email address will not be published. Required fields are marked *

error: Content is protected !!