ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆಯನ್ನ ಹೊತ್ತು ರಾಹುಲ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದ್ರೆ, ಅದು ಇದುವರೆಗೂ ಅಂಗೀಕಾರವಾಗಿಲ್ಲ. ಆದ್ರೆ, ಅವರು ತಮ್ಮ ಟ್ವೀಟರ್ ನಲ್ಲಿ ರಾಜೀನಾಮೆ ಪತ್ರವನ್ನ ಪೋಸ್ಟ್ ಮಾಡಿದ್ದಾರೆ.
ಇನ್ನು ತಮ್ಮ ಟ್ವೀಟರ್ ಖ್ಯಾತೆಯಲ್ಲಿನ ಎಐಸಿಸಿ ಅಧ್ಯಕ್ಷ ಅನ್ನೋ ಪದವನ್ನ ತೆಗೆದು, ಕೇವಲ ಸದಸ್ಯ ಹಾಗೂ ಸಂಸದ ಅಂತಾ ಬರೆದುಕೊಂಡಿದ್ದಾರೆ. ಅಲ್ದೇ, ನಾನು ಇದೀಗ ಕಾಂಗ್ರೆಸ್ ಅಧ್ಯಕ್ಷನಲ್ಲ. ತಡಮಾಡದೇ ನೂತನ ಅಧ್ಯಕ್ಷರನ್ನ ನೇಮಕ ಮಾಡಿ ಅಂತಾ ಬರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ. ಕಳೆದ ಲೋಕಸಭೆ ಚುನಾವಣೆ ಸೋಲಿನ ಬಳಿಕ ಪಕ್ಷ ಗಟ್ಟಿಗೊಳ್ಳಬೇಕಿದೆ. ಪಕ್ಷದ ಪುನಶ್ಚೇತನಕ್ಕೆ ಮತ್ತೊಬ್ಬರನ್ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕಾಗಿದೆ ಅಂತಾ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತಡಮಾಡದೆ ನೂತನ ಅಧ್ಯಕ್ಷರನ್ನ ನೇಮಿಸಬೇಕು. ಈ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸುವುದಿಲ್ಲ ಅಂತಾ ಹೇಳಿದ್ದಾರೆ. ಹೀಗೆ ತಮ್ಮ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.