ಪ್ರಜಾಸ್ತ್ರ ಸುದ್ದಿ
ನವದೆಹಲಿ: ಪ್ರಧಾನ ಮಂತ್ರಿಯವರೆ ನಿಮ್ಮ ಕರಾಳ ದಿನಗಳನ್ನು ಮರೆ ಮಾಚಲು ಮೂಢನಂಬಿಕೆ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವ ಕಳೆಯಬೇಡಿ ಎಂದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಿಯಾದವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂದು ದೇಶ ಬಯಸುತ್ತದೆ ಎಂದು ಚಾಟಿ ಬೀಸಿದ್ದಾರೆ.
ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ದೇಶದ ಸಮಸ್ಯೆಗಳು ಕಾಣಿಸುತ್ತಿಲ್ಲ. ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಮಾತನಾಡಿ ಜನರ ದಿಕ್ಕು ತಪ್ಪಿಸುವುದನ್ನು ನಿಲ್ಲಿಸಿ. ಇಂತಹ ಮಾತುಗಳನ್ನಾಡುವ ಮೂಲಕ ಪ್ರಧಾನಿ ಹುದ್ದೆಯ ಗೌರವ ಕಳೆಯಬೇಡಿ ಎಂದು ತಿರುಗೇಟು ನೀಡಿದ್ದಾರೆ.
ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಆಗಸ್ಟ್ 5ರಂದು ಕಾಂಗ್ರೆಸ್ ನಾಯಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಎಷ್ಟೇ ಬ್ಲ್ಯಾಕ್ ಮಾಜಿಕ್ ಮಾಡಿದರೂ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂದಿದ್ದರು.