ಪ್ರಜಾಸ್ತ್ರ ಸುದ್ದಿ
ಮೈಸೂರು: ಕಳೆದ ರಾತ್ರಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಮಳೆಯಲ್ಲಿಯೇ ಭಾಷಣ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ತಾಲೂಕಿನ ಕಡಕೋಳದಿಂದ ಪಾದಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ, ಮೈಸೂರಿಗೆ ಬರುತ್ತಿದ್ದಂತೆ ಮಳೆ ಸುರಿಯಲು ಪ್ರಾರಂಭಿಸಿದೆ.
ದೊಡ್ಡಕೆರೆ ಮೈದಾನದಲ್ಲಿ ನಿರ್ಮಿಸಿದ್ದ ವೇದಿಕೆ ಮೇಲೆ ನಿಂತು ಮಳೆಯಲ್ಲೇ ಭಾಷಣ ಮಾಡಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಸಹ ಮಳೆಯಲ್ಲೇ ಭಾಷಣ ಕೇಳಿ ಜೈಕಾರ ಹಾಕಿದ್ದಾರೆ. ಈ ವೇಳೆ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಕೊನೆಯದಾಗಿ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದರು.