ಪ್ರಜಾಸ್ತ್ರ ಸುದ್ದಿ
ವಿಜಯಪುರ: ಗುರುವಾರ ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗಿದೆ. ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಮಳೆರಾಯನ ಎಲ್ಲೆಡೆ ಅಬ್ಬರಿಸಿದ್ದಾನೆ. ಇದರಿಂದಾಗಿ ಶಾಲಾ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಪರದಾಡಬೇಕಾಯಿತು.
ವಿಜಯಪುರ ನಗರ, ತಾಲೂಕು, ಸಿಂದಗಿ, ದೇವರಹಿಪ್ಪರಗಿ, ಆಲಮೇಲ, ಇಂಡಿ, ಮುದ್ದೇಬಿಹಾಳ, ತಾಳಿಕೋಟಿ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗಿದೆ. ಇದರಿಂದಾಗಿ ತಾಳಿಕೋಟಿ-ಚವನಭಾವಿ-ನಾಲತವಾದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮುದ್ದೇಬಿಹಾಳ ತಾಲೂಕಿನ ಚವನಭಾವಿ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.