ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಹಲವು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಹ ಆಗಿದೆ. ಮುಂದಿನ ದಿನಗಳಲ್ಲಿ ಕೇರಳ ಮಳೆಯ ಪ್ರಭಾವ ರಾಜ್ಯದ ಮೇಲಾಗುವ ಸಾಧ್ಯತೆಯೂ ಇದೆ.
ಇಂದು ನಗರದ ಬೊಮ್ಮನಹಳ್ಳಿಯ ವಿಧಾನಸಭಾ ಕ್ಷೇತ್ರದ ಮಡಿವಾಳ, ಎಚ್.ಎಸ್ ಆರ್ ಲೇಔಟ್, ಅಗರ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು. ಈ ವೇಳೆ ಸ್ಥಳೀಯರು ಸಿಎಂ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಳೆದ 10 ವರ್ಷಗಳಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಬಿಬಿಎಂಪಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ನಾವು ತೆರಿಗೆ ಕಟ್ಟುತ್ತಿದ್ದೇವೆ. ಆದರೆ, ಸಮಸ್ಯೆಗೆ ಪರಿಹಾರವಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಕೆರೆಗೆ 10-15 ಚರಂಡಿಗಳು ಸೇರಿಕೊಳ್ಳುತ್ತವೆ. ಇದರಿಂದಾಗಿ ಪ್ರತಿವರ್ಷ ನೋವು ಅನುಭವಿಸುವಂತಾಗಿದೆ ಎಂದರು. ಈ ಬಗ್ಗೆ ಆದಷ್ಟು ಅಧಿಕಾರಿಗಳ ಸಭೆ ಕರೆದು ಪರಿಹಾರ ಒದಗಿಸಿಕೊಡುವ ಕೆಲಸ ಮಾಡಲಾಗುವುದು ಎಂದರು.